ಧಾರಾಕಾರ ಮಳೆ: ಮನೆಯಿಂದಲೇ ಕೆಲಸ ಮಾಡಿ, ಐಟಿ ಉದ್ಯೋಗಿಗಳಿಗೆ ತೆಲಂಗಾಣ ಸರ್ಕಾರ

ಧಾರಾಕಾರ ಮಳೆಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿರುವ ತೆಲಂಗಾಣ ಸರ್ಕಾರ, ಐಟಿ ಉದ್ಯೋಗಿಗಳು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿರುವ ತೆಲಂಗಾಣ ಸರ್ಕಾರ, ಐಟಿ ಉದ್ಯೋಗಿಗಳು ಮನೆಯಿಂದಲೇ ಕುಳಿತು ಕೆಲಸ ಮಾಡುವಂತೆ ಸಲಹೆ ನೀಡಿದೆ.

ಭಾರಿ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದರಿಂದ ತೆಲಂಗಾಣ ಸರ್ಕಾರ ಐಟಿ ಸಂಸ್ಥೆಗಳಿಗೆ ಸಲಹೆ ನೀಡಿದೆ. ಮುಂದಿನ ಎರಡು ದಿನಗಳೂ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸತತ 6 ನೇದಿನವೂ ಕೂಡ ಮಳೆ ಎಡೆಬಿಡದೇ ಸುರಿಯುತ್ತಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳೆಲ್ಲಾ ನದಿಗಳಂತಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com