ಯಾವುದೇ ಚರ್ಚೆ ನಡೆಸದೆ ಈ ಹೇಳಿಕೆಯನ್ನು ಕಾರ್ಯಕಾರಿಣಿ ಅನುಮೋದನೆ ನೀಡಿತು. ಉರಿ ಭಯೋತ್ಪಾದಕ ದಾಳಿ ನಂತರ ದೇಶದ ಜನರ ಆಕ್ರೋಶ, ಸಿಟ್ಟು ಹೊರಬಂದಿದ್ದು, ಬಿಜೆಪಿ ಪಕ್ಷ ಜನರ ನೋವನ್ನು ಅರ್ಥ ಮಾಡಿಕೊಳ್ಳುತ್ತದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಮಾಡಿದ ಭಾಷಣದ ವೇಳೆ ಹತ್ಯೆಗೀಡಾದ ಉಗ್ರಗಾಮಿ ಬುರ್ಹಾನ್ ವಾನಿಯನ್ನು ಹೀರೋ ಅಥವಾ ನಾಯಕ ಎಂದು ಸಂಬೋಧಿಸಿದ್ದು, ಇದರಲ್ಲಿಯೇ ಪಾಕಿಸ್ತಾನ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತದೆ, ಭಾರತ ಸೇರಿದಂತೆ ವಿಶ್ವಾದ್ಯಂತ ಉಗ್ರರಿಗೆ ಕುಕೃತ್ಯ ನಡೆಸಲು ಬೆಂಬಲ ನೀಡುತ್ತದೆ ಎಂಬುದು ತಿಳಿಯುತ್ತದೆ ಎಂದರು.