ಛತ್ತೀಸ್ ಗಢ್ ದ ಬಸ್ತಾರ್ ನಲ್ಲಿ ಭದ್ರತಾ ಪಡೆ ಯೋಧರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ ಇಬ್ಬರು ನಕ್ಸಲ್ ಕಮಾಂಡರ್ ಸೇರಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಕಮಾಂಡರ್ ಗಳು ಮೃತಪಟ್ಟರೆ ಮತ್ತೋರ್ವ ನಕ್ಸಲ್ ಕೊಂಡಗಾನ್ ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಬಸ್ತರ್ ನ ಪ್ರಧಾನ ಆರಕ್ಷಕ ನಿರೀಕ್ಷಕ ಕಲ್ಲೂರಿ ಹೇಳಿದ್ದಾರೆ.