ಮೊರಾದಬಾದ್: ಉರಿ ಉಗ್ರ ದಾಳಿಯಲ್ಲಿ ಹುತಾತ್ಮ ಯೋಧರಿಗಾಗಿ ನಡೆದ ರ್ಯಾಲಿ ವೇಳೆ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ ಕಾಂಗ್ರೆಸ್ ನ 200 ಕ್ಕೂ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 18 ಯೋಧರು ಹುತಾತ್ಮರಾಗಿದ್ದರು. ನಾಲ್ಕು ಜನರ ಉಗ್ರರ ಗುಂಪೊಂದು ದಾಳಿ ಮಾಡಿತ್ತು. ದಾಳಿ ಮಾಡಿದ ಎಲ್ಲಾ ಉಗ್ರರನ್ನು ಭಾರತೀಯ ಸೇನಾಪಡೆ ಸದೆಬಡಿಯುವಲ್ಲಿ ಯಶಸ್ವಿಯಾಗಿತ್ತು.
ದಾಳಿ ವೇಳೆ ಹುತಾತ್ಮರಾದ ಯೋಧರಿದೆ ಶ್ರದ್ಧಾಂಜಲಿ ಅರ್ಪಿಸುವುದಕ್ಕಾಗಿ ಉತ್ತರಪ್ರದೇಶದ ಮೊರಾದಬಾದ್ ನಲ್ಲಿ ರ್ಯಾಲಿಯೊಂದರನ್ನು ಏರ್ಪಡಿಸಲಾಗಿತ್ತು. ರ್ಯಾಲಿಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಅಲ್ಲದೆ, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
Advertisement