ಭಾರತೀಯ ಸೇನೆ ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡುತ್ತಿದೆ: ನಿರ್ಮಲ್ ಸಿಂಗ್

ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಯೋಧರು ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆಂದು ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್..
ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್
ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್

ಉಧಂಪುರ: ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಯೋಧರು ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆಂದು ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ,

ಭಾರತೀಯ ಸೇನೆಯ ನಡೆಯನ್ನು ಸ್ವಾಗತಿಸಬೇಕು ಮತ್ತು ಪಾಕಿಸ್ತಾನಕ್ಕೆ ನೀಡುತ್ತಿರುವ ದಿಟ್ಟ ಉತ್ತರವನ್ನು ಶ್ಲಾಘಿಸಲೇಬೇಕು. ಸೇನೆಯ ಈ ನಡೆ ದೇಶದ ಜನರಲ್ಲಿ ಉತ್ಸಾಹ ಮತ್ತು ನೈತಿಕ ಸ್ಥೈರ್ಯವನ್ನು ತುಂಬುತ್ತದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ರಾಷ್ಟ್ರದ ಎಡೆಬಿಡದಂತೆ ಹೇಡಿಗಳಂತೆ ವರ್ತನೆಯನ್ನು ತೋರುತ್ತಿದೆ. ಪಾಕಿಸ್ತಾನದ ಉಗ್ರರಿಗೆ ಅಲ್ಲಿನ ಸೇನೆಯೇ ಕ್ಯಾಂಪ್ ಗಳಲ್ಲಿ ತರಬೇತಿಗಳನ್ನು ನೀಡುತ್ತಿದೆ. ಪಾಕಿಸ್ತಾನ ರಾಷ್ಟ್ರ ಭಯೋತ್ಪಾದನಾ ರಾಷ್ಟ್ರದಂತೆ ವರ್ತಿಸುತ್ತಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com