ರಾಜೀನಾಮೆ ನೀಡಿರುವ ಗೋಪಾಲ ಕೃಷ್ಣ ರೆಡ್ಡಿ ಅವರೊಂದಿಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೂರವಾಣಿ ಮೂಲಕ ಮಾತನಾಡಿದ್ದು, ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಿದ್ದಾರೆ. ಇನ್ನು ಸಚಿವ ಸ್ಥಾನ ಕಳೆದುಕೊಂಡ ಮತ್ತೊಬ್ಬ ಶಾಸಕ ಪ್ರಭಾಕರ್ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಸಚಿವ ಸ್ಥಾನ ವಂಚಿತರಾದ ಶಾಸಕರಾದ ಡಿ ನರೇಂದ್ರ, ಬಿ ಬೊಜ್ಜಿ ಅವರೂ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.