ಜಾರ್ಖಂಡ್ ನ ಅಮರ್ ಕೊಂಡ ಮುರ್ಗದಂಗಲ್ ಕಲ್ಲಿದ್ದಲು ನಿಕ್ಷೇಪದಿಂದ ಕಲ್ಲಿದ್ದಲನ್ನು ಜಿಂದಾಲ್ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ ಹಾಗೂ ಗಗನ್ ಸ್ಪಾಂಜ್ ಐರನ್ ಪ್ರೈವೇಟ್ ಲಿಮಿಟೆಡ್ ಗೆ ಅಕ್ರಮವಾಗಿ ನೀಡಿದೆ ಎಂದು ನವೀನ್ ಜಿಂದಾಲ್ ಸೇರಿದಂತೆ 11 ಮಂದಿ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇವರಲ್ಲಿ ಮಾಜಿ ಸಚಿವರಾದ ದಾಸರಿ ನಾರಾಯಣ ರಾವ್, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹೆಚ್ ಸಿ ಗುಪ್ತಾ ಸೇರಿದ್ದಾರೆ.