ನವದೆಹಲಿ: ಕೊಕೇನ್ ನ್ನು ದೋಣಿಯಲ್ಲಿ ಸಾಗಿಸುತ್ತಿದ್ದ ಆರು ಮಂದಿ ಭಾರತೀಯ ಮೀನುಗಾರರನ್ನು ನೈನತೀವು ಸಮೀಪ ಶ್ರೀಲಂಕಾ ನೌಕಾಪಡೆ ಬಂಧಿಸಿದೆ..ಮೀನುಗಾರರಲ್ಲಿದ್ದ 13.5 ಕೆಜಿ ಕೊಕೇನ್ ನ್ನು ನೌಕಾಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ..ಬಂಧಿತ ಮೀನುಗಾರರನ್ನು ಹೆಚ್ಚಿನ ವಿಚಾರಣೆಗೆ ಕಂಗೆಶಾಂತುರೈ ನೌಕಾ ಶಿಬಿರಕ್ಕೆ ಕರೆದೊಯ್ಯಲಾಗಿದೆ. .ಕಳೆದ ಮಾರ್ಚ್ 26ರಂದು ಶ್ರೀಲಂಕಾ ನೌಕಾಪಡೆ ತಮಿಳುನಾಡಿನ ಪುದುಕೊಟ್ಟೈ ಮತ್ತು ನಾಗಪಟ್ಟಿನಂ ಜಿಲ್ಲೆಗಳಿಂದ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ ದೋಣಿಗಳನ್ನು ವಶಪಡಿಸಿಕೊಂಡಿತ್ತು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಕೊಕೇನ್ ನ್ನು ದೋಣಿಯಲ್ಲಿ ಸಾಗಿಸುತ್ತಿದ್ದ ಆರು ಮಂದಿ ಭಾರತೀಯ ಮೀನುಗಾರರನ್ನು ನೈನತೀವು ಸಮೀಪ ಶ್ರೀಲಂಕಾ ನೌಕಾಪಡೆ ಬಂಧಿಸಿದೆ..ಮೀನುಗಾರರಲ್ಲಿದ್ದ 13.5 ಕೆಜಿ ಕೊಕೇನ್ ನ್ನು ನೌಕಾಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ..ಬಂಧಿತ ಮೀನುಗಾರರನ್ನು ಹೆಚ್ಚಿನ ವಿಚಾರಣೆಗೆ ಕಂಗೆಶಾಂತುರೈ ನೌಕಾ ಶಿಬಿರಕ್ಕೆ ಕರೆದೊಯ್ಯಲಾಗಿದೆ. .ಕಳೆದ ಮಾರ್ಚ್ 26ರಂದು ಶ್ರೀಲಂಕಾ ನೌಕಾಪಡೆ ತಮಿಳುನಾಡಿನ ಪುದುಕೊಟ್ಟೈ ಮತ್ತು ನಾಗಪಟ್ಟಿನಂ ಜಿಲ್ಲೆಗಳಿಂದ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ ದೋಣಿಗಳನ್ನು ವಶಪಡಿಸಿಕೊಂಡಿತ್ತು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ