ಅಪಹರಣವಾಗಿರುವ ಹಡಗಿನಲ್ಲಿದ್ದ ಸಿಬ್ಬಂದಿ ಮುಂಬೈನ ಮಾಂಡವಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಹಡಗನ್ನು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಯತ್ನ ಪ್ರಾರಂಭಿಸಿದೆ. ಜತೆಗೆ ಭಾರತೀಯ ಹಡಗುಗಳು ಅಪಹರಣವಾಗದಂತೆ ತಡೆಯಲು ನೌಕಾಪಡೆ, ಕರಾವಳಿ ರಕ್ಷಣಾ ಪಡೆಗಳು ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.