ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಅರವಿಂದ ಕೇಜ್ರಿವಾಲ್ ಅವರು, ಚುನಾವಣೆಯಲ್ಲಿ ಇವಿಎಂ ಯಂತ್ರವನ್ನೇ ತಿರುಚಲಾಗುತ್ತಿದೆ. ತಿರುಚಲಾಗಿರುವ ಯಂತ್ರಗಳು ಉತ್ತರಪ್ರದೇಶದಿಂದ ಬಂದಿದ್ದು, ಈಗ ಬಿಜೆಪಿ ಭರ್ಜರಿ ಗೆಲುವಿನ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮತಪತ್ರ ಬಳಕೆಗೆ ಸಮಯ ಬೇಕಿದ್ದರೆ ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಮುಂದೂಡಿ. ಮಧ್ಯಪ್ರದೇಶದಲ್ಲಿ ಏಪ್ರಿಲ್ 9ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಉತ್ತರ ಪ್ರದೇಶದ ಗೋವಿಂದ್ ನಗರದಿಂದ ಇವಿಎಂಗಳನ್ನು ಬಳಸಲಾಗುತ್ತಿದ್ದು, ಇದರ ಹಿಂದಿನ ಉದ್ದೇಶ ಏನು ಎಂಬುದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು.