ದೇಶದಲ್ಲಿ ಕೋಮುಸೌಹಾರ್ದತೆ ಕಾಪಾಡಲು ಜಾನುವಾರುಗಳನ್ನು ವಧೆ ಮಾಡುವ ಎಲ್ಲ ಕಸಾಯಿಖಾನೆಗಳನ್ನು ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು ಎಂದು ನರೇಂದ್ರ ಮೋದಿ ಸರ್ಕಾರವನ್ನು ಒತ್ತಾಯಿಸಿದ್ದ ಅಜ್ಮೇರ್ ದರ್ಗಾದ ಧರ್ಮ ಗುರು ಸೈಯದ್ ಝೈನುಲ್ ಅಬೇದಿನ್ ಅವರನ್ನು ಅವರ ಸಹೋದರ ಸೈಯದ್ ಅಲ್ಲಾದೀನ್ ಆಲಿಮಿ ಅವರು ದರ್ಗಾ ಮುಖ್ಯಸ್ಥನ ಸ್ಥಾನದಿಂದ ವಜಾಗೊಳಿಸಿದ್ದು, ತಾನೇ ನೂತನ ಧರ್ಮ ಗುರು ಎಂದು ಘೋಷಿಸಿಕೊಂಡಿದ್ದಾರೆ. ಅಲ್ಲದೆ ತನ್ನ ಈ ನಿರ್ಧಾರವನ್ನು ಕುಟುಂಬ ಬೆಂಬಲಿಸಿರುವುದಾಗಿ ಹೇಳಿದ್ದಾರೆ.