ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಎರಡೂ ಗುಂಪುಗಳಲ್ಲೂ ಸಮಸ್ಯೆಯಿರುವುದು ಕಂಡುಬಂದಿದೆ. ಗೋ ಸಾಗಣೆ ಮಾಡುವುದು ಅಕ್ರಮ ಎಂಬುದು ಜನರಿಗೆ ಗೊತ್ತಿದೆ. ಆದರೂ, ಅವರು ಗೋ ಸಾಗಣೆ ಮಾಡುವುದನ್ನು ನಿಲ್ಲಿಸಿಲ್ಲ. ಇಂತಹ ಅಪರಾಧಗಳನ್ನು ತಡೆಯಲು ಗೋ ಭಕ್ತರು ಈ ರೀತಿಯಾಗಿ ಮಾಡಿದ್ದಾರೆ. ಆಧರೆ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.