ಭೂಪಿಂದರ್ ಹೂಡ ಅವರು ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಪಂಚಕುಳದಲ್ಲಿ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್(ಎಜೆಎಲ್)ಗೆ ಅಕ್ರಮವಾಗಿ ಪ್ಲಾಟ್ ಹಂಚಿಕೆ ಮಾಡಿದ್ದು, ಅಲ್ಲಿ ಯಾವುದೆ ಕಟ್ಟಡ ನಿರ್ಮಾಣವಾಗಿರಲಿಲ್ಲ. ಹೀಗಾಗಿ ಹರಿಯಾಣ ಅಭಿವೃದ್ಧಿ ಪ್ರಾಧಿಕಾರ ಆ ಪ್ಲಾಟ್ ಅನ್ನು ಹಿಂಪಡೆದಿದೆ ಎಂದು ಸಿಬಿಐ ತನ್ನ ಎಫ್ಐಆರ್ ನಲ್ಲಿ ಆರೋಪಿಸಿದೆ. ಅಲ್ಲದೆ 2005ರಲ್ಲಿ ನಿಯಮ ಉಲ್ಲಂಘಿಸಿ ಅದೇ ಪ್ಲಾಟ್ ಅನ್ನು ಮರು ಹಂಚಿಕೆ ಮಾಡಲಾಗಿದೆ ಎಂದು ದೂರಿದೆ.