ಆದೇಶ ಕುರಿತಂತೆ ಉತ್ತರಪ್ರದೇಶ ರಾಜ್ಯ ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಗರ್ ಅವರು ಮಾತನಾಡಿದ್ದು, ರಾಜ್ಯದಲ್ಲಿ ಸಾಕಷ್ಟು ಮದ್ಯದಂಗಡಿಗಳ ಮೇಲೆ ದಾಳಿ ನಡೆಸಿದ್ದು, ಕಳ್ಳತನದಂತಹ ಘಟನೆಗಳು ನಡೆದಿವೆ. ಹೀಗಾಗಿ ಇಂತಹ ಘಟನೆಗಳು ಮರುಕಳಿದಂತೆ ಎಚ್ಚರಿಕೆ ವಹಿಸುವಂತೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಅಬಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿರುವ ಹಲವು ಮದ್ಯದಂಗಡಿಗಳನ್ನು ಈಗಾಗಲೇ ಸ್ಥಳಾಂತರಿಸುವ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.