ರವೀಂದ್ರ ಗಾಯಕ್ವಾಡ್ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಅಭಿಪ್ರಾಯದ ಬಳಿಕ ಸಂಸದ ರವೀಂದ್ರ ಗಾಯಕ್ವಾಡ್ ಪ್ರಕರಣ ಸಂಬಂಧ ವಿಷಾದ ವ್ಯಕ್ತಪಡಿಸಿದ್ದಾರೆ. ಅಶೋಕ್ ಗಜಪತಿ ರಾಜು ಅವರಿಗೆ ಪತ್ರವೊಂದನ್ನು ಬರೆದಿರುವ ಗಾಯಕ್ವಾಡ್ ಅವರು, ತಮ್ಮ ಕಾರ್ಯದಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದ್ದರೆ ತಾವು ವಿಷಾಧ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ.
ಮಾರ್ಚ್ 23ರಂದು ಪುಣೆ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಗಾಯಕ್ವಾಡ್ ಅವರು ಏರ್ ಇಂಡಿಯಾ ಸಿಬ್ಬಂದಿಯೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ್ದರು.