ಬಿಜೆಪಿ ಸೇರುವುದಿಲ್ಲ: ಶಿವಪಾಲ್ ಯಾದವ್

ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಿವಪಾಲ್ ಯಾದವ್
ಶಿವಪಾಲ್ ಯಾದವ್
ಮಥುರಾ: ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 
ಏ.07 ರಂದು ಶಿವಪಾಲ್ ಯಾದವ್-ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿತ್ತು. 30 ನಿಮಿಷಗಳ ಕಾಲ ನಡೆದ ಈ ಭೇಟಿ "ಸೌಹಾರ್ದತೆಯ ಭೇಟಿಗಿಂತಲೂ ಹೆಚ್ಚಿನದ್ದೇನೂ ಇರಬೇಕು" ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದರು. 
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿವಪಾಲ್ ಯಾದವ್, ಸೌಹಾರ್ದತೆಯ ಭೇಟಿಯಾಗಿದ್ದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದರಲ್ಲಿ ವಿಶೇಷ ಇರಲಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ತಾವು ಹೊಸ ಪಕ್ಷ ಸ್ಥಾಪಿಸುವ ಬಗೆಗಿನ ವರದಿಗಳನ್ನೂ ಶಿವಪಾಲ್ ಯಾದವ್ ತಳ್ಳಿಹಾಕಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com