ಈ ಬಗ್ಗೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಎಬಿವಿಪಿ ನಾಯಕ ಅವತಾರ್ ಸಿಂಗ್ ಜಸ್ರೋಟಿಯಾ, ಮಾರ್ಚ್ 5ರಂದು ಜಮ್ಮು-ಕಾಶ್ಮೀರದ ಹಲವು ವಿದ್ಯಾರ್ಥಿಗಳು ರಾಷ್ಟ್ರಗೀತೆಗೆ ಅಗೌರವ ತೋರಿಸಿದ್ದಲ್ಲದೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ದೇಶದ್ರೋಹದ ಕೆಲಸ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ವಿದ್ಯಾರ್ಥಿಗಳಿಂದ ಕ್ಷಮಾಪಣಾ ಪತ್ರ ಪಡೆದುಕೊಳ್ಳುವಂತೆ 48 ಗಂಟೆಗಳ ಕಾಲಾವಧಿಯನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ನೀಡಿದ್ದೆವು. ಆದರೆ ವಿವಿ ಆಡಳಿತ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಹಾಗಾಗಿ ಕ್ರೀಡೆಯನ್ನು ನಿಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.