ನವದೆಹಲಿ: ಗೋ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು ಪ್ರಾಣಿಗಳ ರಕ್ಷಣೆ ವಿಚಾರದಲ್ಲಿ ಕಾನೂನು ಕಾಪಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದೇಶಾದ್ಯಂತ ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಬೇಕು ಎಂದು ಹೇಳಿರುವ ಅವರು ಗೋ ರಕ್ಷಣೆ ಹೆಸರಿನಲ್ಲಿ ಕಾನೂನು ಮೀರಿ ವರ್ತಿಸುವುದು ಸರಿಯಲ್ಲ. ಎಲ್ಲರೂ ಕಾನೂನನ್ನು ಪಾಲಿಸಬೇಕು. ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿ ಸೂಕ್ತ ಕಾನೂನು ರೂಪಿಸಿಬೇಕು ಎಂದು ಆಗ್ರಹಿಸಿದ್ದರು.