ಡಿಜಿಪಿ ಕೆ.ಬಿ.ಸಿಂಗ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರತಿಭಟನೆ ವೇಳೆ ಹಲವು ಅಂಗಡಿಗಳಲ್ಲಿ ದರೋಡೆ ಮಾಡಲಾಗಿದೆ. ದೊಡ್ಡ ಮಟ್ಟದಲ್ಲಿ ಹಿಂಸಾಚಾರಗಳಾವುದೂ ನಡೆದಿಲ್ಲ. ಸಾವು-ನೋವುಗಳು ಸಂಭವಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳು ಹಾಗೂ ವದಂತಿಗಳಿಗೆ ಜನರು ಪ್ರತಿಕ್ರಿಯೆಗಳನ್ನು ನೀಡಬಾರದು. ರಾಜ್ಯದಲ್ಲಿ ಶಾಂತಿ ಕಾಪಾಡಲು ಜನರು ಆಡಳಿತ ಮಂಡಳಿಗಳಿಗೆ ಸಹಾಯ ಮಾಡಬೇಕೆಂದು ಹೇಳಿದ್ದಾರೆ.