ಕಾರು ನಿಲ್ಲಿಸಿ, ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವರಿಗೆ ಹೆಲ್ಮೆಟ್ ಧರಿಸುವಂತೆ ಸಚಿನ್ ಸೂಚನೆ

ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕಾರು ನಿಲ್ಲಿಸಿ ಬೈಕ್ ನಲ್ಲಿ ಹೆಲ್ಮೆಟ್ ಇಲ್ಲದೆ...
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್
ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕಾರು ನಿಲ್ಲಿಸಿ ಬೈಕ್ ನಲ್ಲಿ ಹೆಲ್ಮೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕರಿಗೆ ಹೆಲ್ಮೆಟ್ ಧರಿಸುವಂತೆ ಸೂಚಿಸಿದ್ದಾರೆ. 
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಚಿನ್ ಅವರು ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕರನ್ನು ನೋಡಿದ್ದಾರೆ. ಈ ವೇಳೆ ಮುಂದಕ್ಕೆ ಹೋಗಿ ಕಾರನ್ನು ನಿಲ್ಲಿಸಿ ಕಾರಿನ ಕಿಟಕಿ ಗಾಜನ್ನು ಕೆಳಗೆ ಇಳಿಸಿದ್ದಾರೆ. ಸಚಿನ್ ಕಂಡ ಯುವಕರು ಸೆಲ್ಫಿ ತೆಗೆದುಕೊಳ್ಳು ಮುಂದಾಗುತ್ತಿದ್ದಾಗ ಅವರಿಗೆ ಮೊದಲು ಹೆಲ್ಮೆಟ್ ಧರಿಸುವಂತೆ ಸೂಚಿಸಿದ್ದಾರೆ. ಇದರಿಂದ ಯುವಕರು ತಾವು ಇನ್ಮುಂದೆ ಹೆಲ್ಮೆಟ್ ಬಳಸುವುದಾಗಿ ಸಚಿನ್ ಅವರಿಗೆ ಹೇಳಿದರು.
ರಸ್ತೆ ಸುರಕ್ಷತೆ ಬಗ್ಗೆ ಸಚಿನ್ ಅವರು ಯುವರಿಗೆ ಜಾಗೃತಿ ಮೂಡಿಸಿರುವುದು ಉತ್ತಮ ನಿದರ್ಶನವಾಗಿದೆ. ಈ ವಿಡಿಯೋವನ್ನು ಸಚಿನ್ ಅವರು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದು ವೈರಲ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com