ಶ್ರೀನಗರ ಉಪ ಚುನಾವಣೆ ವೇಳೆ ಪ್ರತಿಭಟನಾಕಾರರು ಯೋಧರ ನಡುವೆ ಘರ್ಷಣೆ, 3 ಸಾವು

ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು...
ಸರತಿ ಸಾಲಿನಲ್ಲಿ ನಿಂತಿರುವ ಮತದಾರರು
ಸರತಿ ಸಾಲಿನಲ್ಲಿ ನಿಂತಿರುವ ಮತದಾರರು
ಶ್ರೀನಗರ: ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.  
ಬುದ್ಗಾಮ್ ನ ಚರಾರ್-ಇ- ಷರೀಫ್ ಬಳಿಯ ಪಕೇರ್ಪೊರಾ ಮತಗಟ್ಟೆ ಬಳಿ ಪ್ರತಿಭಟನಾಕಾರರು ಗಡಿ ಭದ್ರತಾ ಪಡೆ ಯೋಧರ ಮೇಲೆ ಕಲ್ಲುಗಳನ್ನು ತೂರಿದ್ದು ಈ ಹಿನ್ನೆಲೆಯಲ್ಲಿ ಯೋಧರು ಪ್ರತಿಭಟನಾಕಾರರನ್ನು ಚದುರಿಸಲು ಗುಂಡು ಹಾರಿಸಿದ್ದು ಇದರಲ್ಲಿ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. 
ಮೊದಲ ಪ್ರತಿಭಟನಾಕಾರರಿಗೆ ಸ್ಥಳದಿಂದ ತೆರಳುವಂತೆ ಯೋಧರು ಸೂಚನೆ ನೀಡಿದರು. ಯೋಧರ ವಿರುದ್ಧ ಕಲ್ಲುಗಳನ್ನು ತೂರಿದ್ದರಿಂದ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಮೃತರನ್ನು 20 ವರ್ಷದ ಮೊಹಮ್ಮದ್ ಅಬ್ಬಾಸ್ ಮತ್ತು 15 ವರ್ಷದ ಫೈಜಾನ್ ಅಹಮದ್ ಎಂದು ಗುರುತಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com