ನವದೆಹಲಿ: ಇವಿಎಂ ವಿಶ್ವಾಸ ಕಳೆದುಕೊಂಡಿದ್ದರಿಂದ ಮತ್ತೆ ಮತಪತ್ರ ಪದ್ದತಿಗೆ ಮರಳುವಂತೆ 16 ಪ್ರತಿಪಕ್ಷಗಳು ಸೋಮವಾರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿವೆ.
ಕಾಂಗ್ರೆಸ್, ಬಿಎಸ್ಪಿ, ಡಿಎಂಕೆ, ತೃಣಮೂಲ ಕಾಂಗ್ರೆಸ್ ಹಾಗೂ ಎಡರಂಗೆ ಸೇರಿದಂತೆ 16 ರಾಜಕೀಯ ಪಕ್ಷಗಳ ಮುಖಂಡರು ಇಂದು ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಮುಂಬರುವ ಚುನಾವಣೆಗಳಲ್ಲಿ ಮತಪತ್ರ ಬಳಸುವಂತೆ ಆಗ್ರಹಿಸಿವೆ.
ಚುನಾವಣಾ ಅಧಿಕಾರಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಕಪಿಲ್ ಶಿಬಲ್ ಹಾಗೂ ಡಿಎಂಕೆ ನಾಯಕ ಟಿ ಶಿವ ಅವರು, ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಚರ್ಚಿಸಲು ಶೀಘ್ರ ಸರ್ವಪಕ್ಷಗಳ ಸಭೆ ಕರೆಯುವುದಾಗಿ ತಿಳಿಸಿದ್ದಾರೆ ಎಂದರು.