ಇದೇ ವೇಳೆ ರಾಜಸ್ತಾನದ ಅಲ್ವಾರ್ ನಲ್ಲಿ ಗೋರಕ್ಷಕರು ನಡೆಸಿದ ಹಲ್ಲೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಗೋರಕ್ಷಕರು ನಡೆಸಿದ ಹಲ್ಲೆ ನಿಜಕ್ಕೂ ಭಯಾನಕವಾಗಿದೆ. ಎಫ್ಐಆರ್ ದಾಖಲಾಗಿರುವ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆರ್'ಎಸ್ಎಸ್ ಜೊತೆಗೆ ನಂಟು ಹೊಂದಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಇದನ್ನು ನೋಡಿದರೆ ಅವರು ಎಷ್ಟರ ಮಟ್ಟಿಗೆ ನಕಲಿ ಹಾಗೂ ನಿಷ್ಪಕ್ಷಪಾತವಾಗಿದ್ದಾರೆಂಬುದನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.