ಗೋವಾ ನಾಗರಿಕರು ನೀಡಿದ ಜನಾದೇಶವನ್ನು ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಲಿಲ್ಲ, ಹೀಗಾಗಿ ಅವರು ಗೋವಾದಲ್ಲಿ ಸರ್ಕಾರ ರಚಿಸಲು ಮುಂದಾಗಲಿಲ್ಲ ಎಂದು ಹೇಳಿದ್ದಾರೆ, ಕಳೆದ ಫೆಬ್ರವರಿ 4 ರಂದು ನಡೆದ ಗೋವಾ ವಿಧಾನ ಸಭೆ ಚುನಾವಣೆಯಲ್ಲಿ ವಿಶ್ವಜಿತ್ ರಾಣೆ ವಲ್ಪೋಯಿ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. ಆದರೆ ಸರ್ಕಾರ ರಚಿಸುವಲ್ಲಿ ಕಾಂಗ್ರೆಸ್ ವಿಫಲವಾದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.