ಪದೇ ಪದೇ ಗದ್ದಲ ಉಂಟಾದ ಕಾರಣ ಸ್ಪೀಕರ್ ಸುಮಿತ್ರಾ ಮಹಾಜನ್ ಸದನವನ್ನು ಕೆಲಕಾಲ ಮುಂದೂಡಿದ್ದರು. ಲೋಕಸಭೆಯ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸಂಸದ, ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಲು ಅವಕಾಶ ನೀಡಬೇಕು ಎಂಬ ಮನವಿ ಮಾಡಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ತಿರಸ್ಕರಿಸಿದ ಸುಮಿತ್ರಾ ಮಹಾಜನ್ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಶೂನ್ಯ ವೇಳೆಯಲ್ಲಿಯೂ ಪ್ರಸ್ತಾಪ ಮಾಡಬಹುದು ಎಂದು ಹೇಳಿದ್ದರು.