ಹನುಮ ಜಯಂತಿ ಅಂಗವಾಗಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಆದರೆ ಮೆರವಣಿಗೆ ನಡೆಸುತ್ತಿದ್ದ ಸಂಘಟನೆ ಪೂರ್ವಾನುಮತಿ ಪಡೆಯದೇ ಇರುವುದನ್ನು ನಿರಾಕರಿಸಿದೆ. " ಹನುಮ ಜಯಂತಿ ಅಂಗವಾಗಿ ಮೆರವಣಿಗೆ ನಡೆಸುವುದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವು. ಆದರೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳು ನಿರಾಕರಿಸಿದರು ಎಂದು ಪ್ರತ್ಯಾರೋಪ ಮಾಡಿದ್ದಾರೆ.