ವಿದ್ಯುನ್ಮಾನ ಮತಯಂತ್ರಗಳನ್ನು ವಿರೂಪಗೊಳಿಸಲಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಆರೋಪಿಸಿದ್ದಕ್ಕೆ ಚುನಾವಣಾ ಆಯೋಗ ಆರೋಪವನ್ನು ತಳ್ಳಿಹಾಕಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ವಿವಾದವನ್ನು ಬಗೆಹರಿಸುವಂತೆ ಕಾಂಗ್ರೆಸ್ ರಾಷ್ಟ್ರಪತಿಯವರ ಮೊರೆ ಹೋಗಲು ನಿರ್ಧರಿಸಿದೆ.