ಎನ್ ಡಿಎ ಸಭೆಯಲ್ಲಿ ಶಿವಸೇನೆ ಸೇರಿದಂತೆ ಬಿಜೆಪಿ ಮಿತ್ರ ಪಕ್ಷಗಳ ನಾಯಕರು ಉಪಸ್ಥಿತರಿದ್ದರು. ಬಿಜೆಪಿಯನ್ನು ಆಗಾಗ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುವ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರೊಂದಿಗೆ ಸಭೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, 20 ನಿಮಿಷಗಳ ಕಾಲ ಪ್ರತ್ಯೇಕ ಸಭೆ ನಡೆಸಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ.