ತ್ರಿವಳಿ ತಲಾಖ್ ಪದ್ಧತಿಯಿಂದ ಭಾರತ ದೇಶದಲ್ಲಿ ಅನೇಕ ಮುಸ್ಲಿಂ ಕುಟುಂಬಗಳು ಹಾಳಾಗಿವೆ. ಲಿಂಗ ಸಮಾನತೆ ಮತ್ತು ಮಹಿಳೆಯರಿಗೆ ಗೌರವ, ಘನತೆ ಸಿಗಬೇಕು, ಈ ವಿಷಯದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ ಮತ್ತು ಹೊಂದಾಣಿಕೆ ಸಾಧ್ಯವಿಲ್ಲ. ಇನ್ನು ಒಂದೂವರೆ ವರ್ಷದಲ್ಲಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸಲು ಮಂಡಳಿ ನಿರ್ಧರಿಸಿದ್ದು ಸರ್ಕಾರ ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಬೇಡ ಎಂದು ಮಂಡಳಿಯ ಉಪಾಧ್ಯಕ್ಷ ಡಾ.ಸಯೀದ್ ಸಾದಿಕ್ ಹೇಳಿರುವುದಾಗಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.