ಕುಲ್'ಭೂಷಣ್ ಜಾದವ್ ಅವರಿಗೆ ಪಾಕಿಸ್ತಾನ ಗಲ್ಲುಶಿಕ್ಷೆ ವಿಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ತಮ್ಮ ದೇಶದಲ್ಲಿ ನಗೆಪಾಟಲಿಗೆ ಈಡಾಗುತ್ತಿದ್ದಾರೆ. ಜನತೆ ನಾಗರೀಕರಾಗುತ್ತಾರೆಂದು ತಿಳಿದು ನಾವು ಪಾಕಿಸ್ತಾನ ರಚನೆಯಾಗಲಿ ಎಂದು 1947ರಲ್ಲಿ ಅವಕಾಶ ನೀಡಿದ್ದೆವು. ಆದರೆ, ಅವರು ನಾಗರೀಕರಾಗದೆ ಇರುವುದು ದುರಾದೃಷ್ಟಕರ ಸಂಗತಿ. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವವೆಂಬುದೇ ಇಲ್ಲ ಎಂದು ಹೇಳಿದ್ದಾರೆ.