ಮೀರತ್ : ಮೀರತ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದೆ. ಹಿಂದೂ ಯುವ ವಾಹಿನಿ ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ಯುವಕನೊಬ್ಬನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ.
ಮೀರತ್ನ ಶಾಸ್ತ್ರಿ ನಗರದ ಮುಸ್ಲಿಂ ಯುವಕ ತನ್ನ ಪ್ರೇಯಸಿಯೊಂದಿಗೆ ಇದ್ದಾಗ ಹಿಂದೂ ಯುವ ವಾಹಿನಿ ಕಾರ್ಯಕರ್ತರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಆ ನಂತರ ಈ ಜೋಡಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಹಿಂದೂ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದಿದ್ದ ಮುಸ್ಲಿಂ ಯುವಕ, ಆಕೆಯನ್ನು ಬಲವಂತವಾಗಿ ಮತಾಂತರ ಗೊಳಿಸಲು ಯತ್ನಿಸುತ್ತಿದ್ದ ಎಂದು ಹಿಂದೂ ಯುವವಾಹಿನಿಯ ನರೇಂದ್ರ ಸಿಂಗ್ ತೋಮಾರ್ ಆರೋಪಿಸಿದ್ದಾರೆ.
ಮುಸ್ಲಿಂ ಯುವಕ ಹಿಂದೂ ಯುವತಿ ಜೊತೆ ಸಲ್ಲಾಪದಲ್ಲಿ ತೊಡಗಿದ್ದ, ಜೊತೆಗೆ ಆಕೆಯನ್ನು ಮತಾಂತರಗೊಳಿಸಲು ಯತ್ನಿಸಿದ್ದ, ಆದರೆ ಪೊಲೀಸರು ಇದರ ವಿರುದ್ಧ ಕ್ರಮ ಕೈಗೊಂಡಿಲ್ಲ, ಆತನ ಪೂರ್ವಾಪರ ವಿಚಾರಿಸಿದೇ ಮನೆ ಬಾಡಿಗೆಗೆ ನೀಡಿದ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.