ನವದೆಹಲಿ: ತಮ್ಮ ಪುತ್ರ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ನೇಮಕ ಮಾಡುವ ಕುರಿತು ಕೇಳಿಬರುವ ಪ್ರಶ್ನೆಗಳನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ತಪ್ಪಿಸಿಕೊಳ್ಳಲು ಯತ್ನಿಸಿದರು. ನಿನ್ನೆ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿತ್ತು.
ಪಕ್ಷದ ಅಧ್ಯಕ್ಷರ ಬದಲಾವಣೆ ನಡೆದಾಗ ಜನರಿಗೆ ಗೊತ್ತಾಗುತ್ತದೆ ಎಂದು ಮಾಧ್ಯಮದವರಿಗೆ ಉತ್ತರಿಸಿದರು.
ಸೋನಿಯಾ ಗಾಂಧಿಯವರು ನಿನ್ನೆ ಪಕ್ಷದ ಸಂಸದರು ಮತ್ತು ಪದಾಧಿಕಾರಿಗಳ ರಾತ್ರಿ ಭೋಜನ ಸಭೆ ಕರೆದಿದ್ದರು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಸಂಸದ ಶಶಿ ತರೂರ್ ಮೊದಲಾದವರು ಭೋಜನಕೂಟದಲ್ಲಿ ಭಾಗವಹಿಸಿದ್ದರು.
ನಾಳೆ ಸಂಸತ್ ಕಲಾಪ ಮುಗಿಯಲಿದ್ದು ಅದರ ಬಳಿಕ ಕಾಂಗ್ರೆಸ್ ನಲ್ಲಿ ಪುನರ್ರಚನೆ ನಡೆಯಲಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.