ನವೆಂಬರ್ 4 ರಂದು ಕಪ್ಪುತ್ತಗುಡ್ಡಕ್ಕೆ ನೀಡಲಾಗಿದ್ದ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಸ್ಥಾನಮಾನವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿತ್ತು. ಕಪ್ಪತ್ತಗುಡ್ಡ ಉತ್ತರ ಕರ್ನಾಟಕ ಜನತೆಯ ಜೀನವಾಡಿಯಾಗಿದ್ದು, ಕೇವಲ ಗದಗ ಮಾತ್ರವಲ್ಲದೆ, ಎಲ್ಲಾ ಜಿಲ್ಲೆಗಳ ಜನತೆಯಲ್ಲಿ ಕಪ್ಪತ್ತಗುಡ್ಡದಲ್ಲಿನ ಅಮೂಲ್ಯ ಔಷಧಿ ಸಸ್ಯಗಳು ಉಳಿಯಬೇಕು. ಅವು ಉಳಿಯಬೇಕಾದಲ್ಲಿ ಕಪ್ಪತ್ತಗುಡ್ಡ ಉಳಿಯಬೇಕೆಂದು ಗದಗ ಸೇರಿದಂತೆ ರಾಜ್ಯಾದ್ಯಂತ ಜನತೆ ಹಲವಾರು ಹೋರಾಟಗಳನ್ನು ನಡೆಸಿತ್ತು. ಜನತೆಯ ಹೋರಾಟಕ್ಕೆ ಕೊನೆಗೂ ಮಣಿದಿರುವ ಸರ್ಕಾರ ಕಪ್ಪತ್ತಗುಡ್ಡಕ್ಕೆ ಮತ್ತೆ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಸ್ಥಾನಮಾನ ನೀಡಲು ತೀರ್ಮಾನ ಕೈಗೊಂಡಿದೆ.