ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಿಂಚಣಿ ಯೋಜನೆ ರದ್ದುಗೊಳಿಸಿದ ಯೋಗಿ ಸರ್ಕಾರ

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಉತ್ತರ ಪ್ರದೇಶದಲ್ಲಿ ಈ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರ ಜಾರಿಗೆ ತಂದಿದ್ದ....
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on
ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಉತ್ತರ ಪ್ರದೇಶದಲ್ಲಿ ಈ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರ ಜಾರಿಗೆ ತಂದಿದ್ದ ಸಮಾಜವಾದಿ ಪಿಂಚಣಿ ಯೋಜನೆಯನ್ನು ಮಂಗಳವಾರ ರಾತ್ರಿ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಯೋಜನೆಗಳನ್ನು ಯೋಗಿ ಆದಿತ್ಯನಾಥ್ ಅವರು ಪರಿಶೀಲಿಸುತ್ತಿದ್ದು, ಸಮಾಜವಾದಿ ಪಿಂಚಣಿ ಯೋಜನೆಯನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ಮತ್ತು ಆ ಯೋಜನೆಯ ಫಲಾನುಭವಿಗಳು ಪಿಂಚಣಿ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿರುವುದಾಗಿ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಸಮಾಜವಾದಿ ಪಿಂಚಣಿ ಯೋಜನೆಯ ಫಲಾನುಭಿಗಳ ಪಟ್ಟಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್ ಒಂದು ತಿಂಗಳ ಗಡುವು ನೀಡಿದ್ದಾರೆ. ಅಲ್ಲದೆ ಈ ಯೋಜನೆಯನ್ನು ಮುಖ್ಯಮಂತ್ರಿ ಪಿಂಚಣಿ ಯೋಜನೆ ಎಂದು ಮರುನಾಮಕರಣ ಮಾಡುವಂತೆ ಸಲಹೆ ನೀಡಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಈ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ತಿಂಗಳಿಗೆ 500 ರುಪಾಯಿ ಪಿಂಚಣಿ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com