ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಯೋಜನೆಗಳನ್ನು ಯೋಗಿ ಆದಿತ್ಯನಾಥ್ ಅವರು ಪರಿಶೀಲಿಸುತ್ತಿದ್ದು, ಸಮಾಜವಾದಿ ಪಿಂಚಣಿ ಯೋಜನೆಯನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ಮತ್ತು ಆ ಯೋಜನೆಯ ಫಲಾನುಭವಿಗಳು ಪಿಂಚಣಿ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿರುವುದಾಗಿ ಅಧಿಕೃತ ವಕ್ತಾರರು ತಿಳಿಸಿದ್ದಾರೆ.