ಅಂಬೇಡ್ಕರ್ ಜಯಂತಿಯಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಮಹಾತ್ಮರ ಜನ್ಮದಿನಾಚರಣೆಯ ವೇಳೆ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ರಾಜಸ್ಥಾನ ರಾಜ್ಯಪಾಲ, ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಸಹ ಯೋಗಿ ಆದಿತ್ಯನಾಥ್ ಮಾದರಿಯಲ್ಲೇ ಹೇಳಿಕೆ ನೀಡಿದ್ದು, ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡಬಾರದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.