ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಿನ್ನೆ ವಿಮಾನ ಭದ್ರತಾ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು.
ಮುಂಬೈ, ಹೈದರಾಬಾದ್ ಮತ್ತು ಚೆನ್ನೈ ವಿಮಾನ ನಿಲ್ದಾಣಗಳಿಂದ ಏಕಕಾಲಕ್ಕೆ ವಿಮಾನ ಹೈಜಾಕ್ ಮಾಡುವ ಬಗ್ಗೆ 6 ಹುಡುಗರ ತಂಡ ಚರ್ಚಿಸುತ್ತಿದ್ದರು ಎಂದು ಮಹಿಳೆಯೊಬ್ಬರಿಂದ ಇಮೇಲ್ ಬಂದಿದೆ. ಒಟ್ಟು 23 ಮಂದಿಯ ತಂಡ ವಿಮಾನವನ್ನು ಭಾನುವಾರ ಅಂದರೆ ಇಂದು ಅಪಹರಣ ಮಾಡಲಿದೆ ಎಂದು ತೀರ್ಮಾನಿಸಿದ್ದಾರೆ ಎಂಬುದಾಗಿ ಇಮೇಲ್ ನಲ್ಲಿ ಇದೆ.
ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕ ಒ.ಪಿ.ಸಿಂಗ್ ದೃಢಪಡಿಸಿದ್ದಾರೆ. ಹಲವು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ಧಾಣದ ನಿಯಂತ್ರಣ ಮತ್ತು ಗಸ್ತು ನೋಡಿಕೊಳ್ಳಲಾಗುತ್ತಿದೆ.
ಹಲವು ಭದ್ರತಾ ಯೋಧರನ್ನು ವಿಮಾನ ನಿಲ್ದಾಣಗಳಲ್ಲಿ ಈಗ ನಿಯೋಜಿಸಲಾಗಿದೆ.
ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ಜೊತೆ ನಗರ ಪೊಲೀಸ್ ಪಡೆ ಕೂಡ ಕಾರ್ಯಪ್ರವೃತ್ತವಾಗಿದೆ.