ಕಳೆದ 4-5 ತಿಂಗಳಿನಿಂದ ವೇತನ ಸಿಗದೇ ಇದ್ದ ಹಿನ್ನೆಲೆಯಲ್ಲಿ ಮಾಲಿಕನ ಬಳಿ ನೌಕರ ವೇತನ ಕೇಳಿದ್ದಾನೆ. ಆದರೆ ಬೇಕರಿ ಮಾಲಿಕ ಹಾಗೂ ಆತನ ಇಬ್ಬರು ಮಕ್ಕಳು ಹರಿತವಾದ ಸಾಧನದಿಂದ ಇರಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.