ಮುಸ್ಲಿಂ ಮೀಸಲಾತಿ ವಿರೋಧಿಸಿ ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ, ಪ್ರತಿಪಕ್ಷ ನಾಯಕರ ಬಂಧನ

ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಒದಗಿಸಲು ಮುಂದಾಗಿರುವ ಕೆ.ಚಂದ್ರಶೇಖರ್ ರಾವ್ ಸರ್ಕಾರದ...
ಕೆ.ಚಂದ್ರಶೇಖರ್ ರಾವ್
ಕೆ.ಚಂದ್ರಶೇಖರ್ ರಾವ್
Updated on
ಹೈದರಾಬಾದ್: ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಒದಗಿಸಲು ಮುಂದಾಗಿರುವ ಕೆ.ಚಂದ್ರಶೇಖರ್ ರಾವ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಸೋಮವಾರ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತ ಹಲವು ನಾಯಕರನ್ನು ವಶಕ್ಕೆ ಪಡೆಯಲಾಗಿದೆ.
ನಿನ್ನೆಯಷ್ಟೇ ಬಿಜೆಪಿ ವಿಧಾನಸಭೆ ಒಳಗೆ ಮತ್ತು ಹೊರಗೆ ಮುಸ್ಲಿಂ ಮೀಸಲಾತಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ, ಇಂದು ರಾಜ್ಯದ 31 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಮುಸ್ಲಿಂ ಮೀಸಲಾತಿ ಅಸಂವಿಧಾನಿಕ ಎಂದು ಆರೋಪಿಸಿರುವ ಬಿಜೆಪಿ ಅದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದರು. ಹೀಗಾಗಿ ನೂರಾರು ಕಾರ್ಯಕರ್ತರು ಹಾಗೂ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೆಲಂಗಾಣ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ಶೇ.4ರಿಂದ 12ಕ್ಕೆ ಹೆಚ್ಚಿಸುವ ಮೀಸಲಾತಿ ಮಸೂದೆಯನ್ನು ಭಾನುವಾರ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಿದೆ. ಆದರೆ ಮಸೂದೆ ಒಂದು ರದ್ದಿ ಕಾಗದ ಎಂದಿರುವ ಬಿಜೆಪಿ, ಮಸೂದೆ ರಾಷ್ಟ್ರಪತಿಗಳಿಂದ ತಿರಸ್ಕೃತಗೊಳ್ಳಲಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com