2 ವರ್ಷದಲ್ಲಿ ಎಎಪಿ ಮಾಡಿದ ಕೆಲಸವನ್ನು ಕಾಂಗ್ರೆಸ್ 15 ವರ್ಷದಲ್ಲಿ ಮಾಡಲಿಲ್ಲ: ಕೇಜ್ರಿವಾಲ್

ಮಾಜಿ ಸಿಎಂ ಶೀಲಾ ದೀಕ್ಷಿತ್ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು, ಆದರೆ ಎಎಪಿ ಸರ್ಕಾರ 2 ವರ್ಷದಲ್ಲಿ ಮಾಡಿದ ಕೆಲಸವನ್ನು ...
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Updated on
ನವದೆಹಲಿ: ಮಾಜಿ ಸಿಎಂ ಶೀಲಾ ದೀಕ್ಷಿತ್ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು, ಆದರೆ ಎಎಪಿ ಸರ್ಕಾರ 2 ವರ್ಷದಲ್ಲಿ ಮಾಡಿದ ಕೆಲಸವನ್ನು ಕಾಂಗ್ರೆಸ್ 15 ವರ್ಷ ಆಡಳಿತ ನಡೆಸಿದರೂ ಮಾಡಲಾಗಲಿಲ್ಲ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದಿಯೋಲಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, 2015 ರ ದೆಹಲಿಯಲ್ಲಿ ನೀಡಿದಂತೆ ದೆಹಲಿ ಮುನಿಸಿಪಾಲಿಟಿ ಚುನಾವಣೆಯಲ್ಲಿ ಎಎಪಿ ಪರ ಜನಾದೇಶ ನೀಡಬೇಕೆಂದು ಅವರು ಮನವಿ ಮಾಡಿದರು. 
ಎಲೆಕ್ಟ್ರಾನಿಕ್ ಮತಯಂತ್ರಗಳ ದೋಷದಿಂದಾಗಿ ಪಂಜಾಬ್ ನಲ್ಲಿ ನಮ್ಮ ಪಕ್ಷ ಸೋತಿತು ಎಂದು ಹೇಳಿದ ಅವರು ದೆಹಲಿ ಮುನಿಸಿಪಲ್ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com