ರಮ್ಯ ಅವರ ವಿರುದ್ಧ ದಾಖಲಾಗಿದ್ದ ರಾಷ್ಟ್ರದ್ರೋಹ ಪ್ರಕರಣವನ್ನು ಸೋಮಾರಪೇಟೆ ನ್ಯಾಯಾಲಯ ವಜಾಗೊಳಿಸಿದೆ. ವಿಚಾರಣೆ ನಡೆಸಿ, ಪ್ರಕರಣವನ್ನು ವಜಾಗೊಳಿಸಿರುವ ನ್ಯಾಯಾಲಯ "ಪಾಕಿಸ್ತಾನವನ್ನು ಅಧಿಕೃತವಾಗಿ ಶತ್ರು ರಾಷ್ಟ್ರ ಎಂದು ಪರಿಗಣಿಸಲಾಗಿಲ್ಲ. ಅಥವಾ ಸರ್ಕಾರವೂ ಸಹ ಪಾಕಿಸ್ತಾನವನ್ನು ಅಧಿಕೃತವಾಗಿ ಶತ್ರು ರಾಷ್ಟ್ರ ಎಂದು ಘೋಷಿಸಲಾಗಿಲ್ಲ. ಪಾಕಿಸ್ತಾನದ ಸೇನೆ ಹಾಗೂ ಭಯೋತ್ಪಾದಕರಿಂದ ನಮ್ಮ ದೇಶದ ಯೋಧರನ್ನು ಹತ್ಯೆಯಾಗಿದ್ದಾರೆ. ಹಾಗೆಂದ ಮಾತ್ರಕ್ಕೆ ಪಾಕಿಸ್ತಾನದ ಜನತೆಯನ್ನು ತಪ್ಪಿತಸ್ಥರೆಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.