ತ್ರಿವಳಿ ತಲಾಖ್ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಪ್ರತಿಕ್ರಿಯೆ ನೀಡಿದ್ದ ಯೋಗಿ ಆದಿತ್ಯನಾಥ್ ಅವರು, ತ್ರಿವಳಿ ತಲಾಖ್ ಅನ್ನು ಹಿಂದೂಗಳ ಪುರಾಣ ಗ್ರಂಥ ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಹೋಲಿಕೆ ಮಾಡಿದ್ದರು. ಜ್ವಲಂತ ಸಮಸ್ಯೆಯಾಗಿರುವ ತ್ರಿವಳಿ ತಲಾಖ್ ಬಗ್ಗೆ ಮೌನ ವಹಿಸುವುದು ದ್ರೌಪದಿಯ ವಸ್ತ್ರಾಪಹರಣದಷ್ಟೇ ಸಮಾನ ತಪ್ಪು. ಚಂದ್ರಶೇಖರ್ ಕೂಡ ಸಮಾನ ನಾಗರಿಕ ಸಂಹಿತೆಯ ಪರವಾಗಿದ್ದರು. ಎಲ್ಲಾ ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದರು.