ಪೂರಿ ಜಗನ್ನಾಥ ದೇಗುಲದಲ್ಲಿ ನಡೆದ ಘಟನೆ ಹಾಗೂ ಗೋಮಾಂಸ ಸೇವನೆ ಕುರಿತಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಸಾಕಷ್ಟು ಪ್ರತಿಭಟನೆಗಳು ಹಾಗೂ ವಿರೋಧಗಳನ್ನು ಮಮತಾ ಬ್ಯಾನರ್ಜಿಯವರು ಎದುರಿಸುತ್ತಿದ್ದು, ಪ್ರತಿಭಟನೆಗಳು ಹಾಗೂ ವಿರೋಧದ ನಡೆವೆಯೂ ದೇಗುಲಕ್ಕೆ ಇಂದು ಭೇಟಿ ನೀಡಲಿದ್ದಾರೆ. ಮಮತಾ ಭೇಟಿ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.