ರಾಜಸ್ಥಾನದ ಮೇವಾರ್ ವಿಶ್ವವಿದ್ಯಾನಿಲಯದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಆರೋಪಿಸಿ ಸ್ಥಳೀಯರು ಹಲ್ಲೆ ನಡೆಸಿದ್ದರು. ಇದಾದ ಬಳಿಕವೇ ಕಾಶ್ಮೀರದಲ್ಲಿ ಸೇನಾ ಪಡೆ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣದಿಂದ ಆಕ್ರೋಶಗೊಂಡಿದ್ದ ಉತ್ತರ ಪ್ರದೇಶದ ಜನತೆ, ಕಲ್ಲು ತೂರಾಟ ನಡೆಸುವ ಕಾಶ್ಮೀರಿಗಳು ಕೂಡಲೇ ಉತ್ತರ ಪ್ರದೇಶವನ್ನು ಬಿಟ್ಟು ತೊಲಗಬೇಕೆಂಬ ಹೋರ್ಡಿಂಗ್ ಗಳನ್ನು ಹಾಕಲಾಗಿತ್ತು. ಈ ಎರಡೂ ಘಟನೆಗಳು ನಡೆಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿಗಳ ವಿರುದ್ಧ ನಡೆಯಬಹುದಾದ ದೌರ್ಜನ್ಯಗಳನ್ನು ತಡೆಗಟ್ಟುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.