ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯ ಜಿಲ್ಲಾಧಿಕಾರಿ ಹಾಗೂ ಹಿರಿಯ ಎಸ್ ಪಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋಮು ಭಾವನೆಗಳನ್ನು ಕೆರಳಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಗ್ರೂಪ್ ಗಳಲ್ಲಿ ಪೋಸ್ಟ್, ವಿಡಿಯೋ, ಫೋಟೋಗಳನ್ನು ಅಪ್ ಡೇಟ್ ಮಾಡಿದರೆ ಅದಕ್ಕೆ ಗ್ರೂಪ್ ನ ನಿರ್ವಾಹಕರನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂಬ ಆದೇಶ ಹೊರಡಿಸಿದ್ದಾರೆ.