ಸುಮಾರು 18 ವರ್ಷದ 25 ಉಗ್ರರು ನೇಪಾಳದಿಂದ ಭಾರತಕ್ಕೆ ನುಸುಳಿದ್ದು, ಉತ್ತರ ಪ್ರದೇಶದಲ್ಲಿ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ವರದಿ ತಿಳಿಸಿದೆ. ಹೀಗಾಗಿ ಭಾರತ-ನೇಪಾಳ ಗಡಿಯಲ್ಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಲ್ಲದೆ ಉತ್ತರ ಪ್ರದೇಶದ ಎಲ್ಲಾ ಆಯಕಟ್ಟಿನ ಮತ್ತು ಪ್ರಮುಖ ದೇವಾಲಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.