ಡೆಂಘೀ ಹೇಳಿಕೆ: ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ

ಡೆಂಘೀ ಮತ್ತು ಚಿಕೂನ್ ಕುರಿತಂತೆ ಹೇಳಿಕೆ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಶನಿವಾರ ದೂರು ದಾಖಲಿಸಿದೆ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ನವದೆಹಲಿ: ಡೆಂಘೀ ಮತ್ತು ಚಿಕೂನ್ ಕುರಿತಂತೆ ಹೇಳಿಕೆ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಶನಿವಾರ ದೂರು ದಾಖಲಿಸಿದೆ. 
ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿಯವರು ನಾರ್ಥ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. 
ಕೇಜ್ರಿವಾಲ್ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಚುನಾವಣೆಗೆ ಸಂಬಂಧಿಸಿದ ಕೆಲ ಪೋಸ್ಟ್ ಗಳನ್ನು ಹಾಕಿದ್ದು, ಸಾಮಾಜಿಕ ಜಾಲತಾಣಗಳ ಮೂಲಕವೂ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಕೇಜ್ರಿವಾಲ್ ಅವರ ಫೇಸ್ ಬುಕ್ ಅಕೌಂಟ್ ನ್ನು ತೆಗೆದು ಹಾಕುವಂತೆ ಆಗ್ರಹಿಸಿದ್ದಾರೆ. 
ನಿನ್ನೆಯಷ್ಟೇ ಬಿಜೆಪಿ ವಿರುದ್ಧ ಕಿಡಿಕಾರಿದ್ದ ಕೇಜ್ರಿವಾಲ್ ಅವರು, ದೆಹಲಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ, ಮಕ್ಕಳಿಗೆ ಡೆಂಘೀ ಮತ್ತು ಚಿಕೂನ್ ಗುನ್ಯಾದಂಥ ಕಾಯಿಲೆಗಳು ಬಂದರೆ ಮತದಾರರೇ ಜವಾಬ್ದಾರರಾಗಲಿದ್ದಾರೆಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com