ಈ ಹಿನ್ನಲೆಯಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ಇದು ವಿವಾದವಲ್ಲ. ಪಶ್ಚಿಮ ಬಂಗಾಳದಲ್ಲಿಂದು ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಬಂಗಾಳದಲ್ಲಿ ಜೈ ಶ್ರೀರಾಮ್ ಎಂದು ಕೂಗಬಾರದು, ರಾಮ ನವಮಿ ಆಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾರತದಲ್ಲಿರುವ ಜನತೆ ಜೈ ಶ್ರೀರಾಮ್ ಎಂದು ಕೂಗಬಾರದು. ಆದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಜೋರಾಗಿ ಕೂಗಬಹುದು. ಹೀಗಾಗಿ ನಾನು ಈ ರೀತಿಯ ಹೇಳಿಕೆಯನ್ನು ನೀಡಿದ್ದೆ ಎಂದು ಹೇಲಿದ್ದಾರೆ.