ಮುಂಬರುವ ಜುಲೈ ತಿಂಗಳ ಅಂತ್ಯದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿದಿದೆ. ಗುಜರಾತ್ ನ ಬಿಜೆಪಿ ಕಾರ್ಯಕರ್ತರು ರಾಷ್ಟ್ರಪತಿ ಸ್ಥಾನಕ್ಕೆ ಪಟೇಲ್ ಅವರು ನಿಂತರೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬೆಂಬಲ ಸೂಚಿಸಿದ್ದಾರೆ. ಆದರೆ, ಉಳಿದ ಇನ್ನಾವುದೇ ಬಿಜೆಪಿ ನಾಯಕರು ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಈ ಬಗ್ಗೆ ಆನಂದಿಬೆನ್ ಪಟೇಲ್ ಅವರೂ ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.