ರಾಷ್ಟ್ರಪತಿ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ಅತ್ಯುತ್ತಮ ಅಭ್ಯರ್ಥಿ: ಸುಬ್ರಮಣಿಯನ್ ಸ್ವಾಮಿ

ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು...
ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
Updated on
ನವದೆಹಲಿ: ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಸುಬ್ರಮಣಿಯನ್ ಸ್ವಾಮಿಯವರು, ರಾಷ್ಟ್ರಪತಿ ಸ್ಥಾನಕ್ಕೆ ಅತ್ಯುತ್ತಮವಾದ ಅಭ್ಯರ್ಥಿಯೆಂದರೆ ಅದು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು. ಆನಂದಿಬೆನ್ ಪಟೇಲ್ ಅವರು ಗುಜರಾತಿ ಆದರೇನು? ನಾನೂ ಕೂಡ ಗುಜರಾತ್ ರಾಜ್ಯದ ಅಳಿಯ ಎಂದು ಹೇಳಿಕೊಂಡಿದ್ದಾರೆ. 
ಮುಂಬರುವ ಜುಲೈ ತಿಂಗಳ ಅಂತ್ಯದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿದಿದೆ. ಗುಜರಾತ್ ನ ಬಿಜೆಪಿ ಕಾರ್ಯಕರ್ತರು ರಾಷ್ಟ್ರಪತಿ ಸ್ಥಾನಕ್ಕೆ ಪಟೇಲ್ ಅವರು ನಿಂತರೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬೆಂಬಲ ಸೂಚಿಸಿದ್ದಾರೆ. ಆದರೆ, ಉಳಿದ ಇನ್ನಾವುದೇ ಬಿಜೆಪಿ ನಾಯಕರು ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಈ ಬಗ್ಗೆ ಆನಂದಿಬೆನ್ ಪಟೇಲ್ ಅವರೂ ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com